ಅಗರಿ ಸಂಸ್ಮರಣೆ: ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿಗೆ ಅಗರಿ ಪ್ರಶಸ್ತಿ

ಸುರತ್ಕಲ್ : ಜೀವನದಲ್ಲಿನ ಒಳ್ಳೆತನಗಳು ಸಂಸ್ಕರಣೆಯಾಗುತ್ತದೆ. ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆ ಮಾಡಿದಂತಹ ಶ್ರೀನಿವಾಸ ಭಾಗವತರಂತಹ ವ್ಯಕ್ತಿತ್ವ ಬೇರೆ ಯಾರು ಇಲ್ಲ ಎಂದು ಶ್ರೀ ಕ್ಷೇತ್ರ ಕಟೀಲಿನ ಅನುವಂತಿಕ ಆರ್ಚಕ ವೇದಮೂರ್ತಿ ಕಮಲಾದೇವಿ ಪ್ರಸಾದ ಆಸ್ಪಣ್ಣ ಹೇಳಿದರು.


ಸುರತ್ಕಲ್ ನ ಗೋವಿಂದ ವಾಸ ಕಾಲೇಜು ಹಾಗೂ ಅಗರಿ ಶ್ರೀನಿವಾಸ ಭಾಗವತರ ಸಂಸ್ಕರಣಾ ವೇದಿಕೆ ಆಶ್ರಯದಲ್ಲಿ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಯಕ್ಷ ಕೇಸರಿ ಅಗರಿ ರಘುರಾಮ ಭಾಗವತ ವೇದಿಕೆಯಲ್ಲಿ ಜರುಗಿದ ‘ಯಕ್ಷಯಾನ’ ಮಂಗಳೂರು ವಿವಿಲಯ ಮಟ್ಟದ ಅಂತ‌ರ್ ಕಾಲೇಜು ತೆಂಕು ತಿಟ್ಟು ಯಕ್ಷಗಾನ ಸ್ಪರ್ಧೆಯ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಸಮಾರಂಭದಲ್ಲಿ ಆಗರಿ ರಘುರಾಮ ಭಾಗವತ ಪ್ರಶಸ್ತಿಯನ್ನು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡಿಗೆ 50 ಇಂಚಿನ ಎಲ್ ಈ ಡಿ ಟಿ ವಿ ಯೊಂದಿಗೆ ಹಾಗೂ ಕಟೀಲು ಮೇಳದ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ ಅವರಿಗೆ ಅಗರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಉದ್ಯಮಿ ಶ್ರೀಪತಿ ಭಟ್ ಮೂಡುಬಿದಿರೆ ವಹಿಸಿದ್ದು, ಹಿಂದು ವಿದ್ಯಾದಾಯಿನೀ ಸಂಘ ಸುರತ್ಕಲ್ ನ ಅಧ್ಯಕ್ಷ ಜಯಚಂದ್ರ ಹತ್ವಾರ್ ಎಸ್ , ಕಿನ್ನಿಗೋಳಿಯ ಶ್ರೀನಿವಾಸ ಕಾಲೇಜಿನ ಪ್ರೊಫೆಸರ್ ಶ್ರೀನಾಥ್ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲ ಪ್ರೊ ಹರೀಶ್. ಆಚಾರ್ಯ ಪಿ. ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ರಮೇಶ ಭಟ್ ಎಸ್. ಜಿ. ಯಕ್ಷಯಾನ ಸಂಚಾಲಕಿ ಪೂರ್ಣಿಮಾ ಯತೀಶ್ ರೈ, ಆಗರಿ ದಿನೇಶ್ ರಾವ್ ಉಪಸ್ಥಿತರಿದ್ದರು.
ಅಗರಿ ಸಂಸ್ಕರಣ ಭಾಷಣವನ್ನು ಕೃಷ್ಣ ಪ್ರಕಾಶ ಉಳಿತ್ತಾಯ ಅವರು ಹಾಗೂ ಅಭಿನಂದನಾ ಭಾಷಣವನ್ನು ವಾದಿರಾಜ ಕಲ್ಲೂರಾಯ ಮಾಡಿದರು. ಬೆಳಗ್ಗೆಯಿಂದ ಸಂಜೆವರೆಗೆ ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ ನಡೆಯಿತು.

ಅಗರಿ ರಾಘವೇಂದ್ರ ರಾವ್ ಸ್ವಾಗತಿಸಿದರು. ಗಿರೀಶ್ ನಾವಡ ನಿರೂಪಿಸಿದರು.

ಬೆಳಿಗ್ಗೆ ನಡೆದ ಕಾರ್ಯಕ್ರಮದ ಉದ್ಘಾಟನೆಯನ್ನು ರಘುನಾಥ ಶೆಟ್ಟಿ ಕೃಷಪುರ ನೆರವೇರಿಸಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲ ಪ್ರೊ. ಹರೀಶ ಆಚಾರ್ಯ ಪಿ. ವಹಿಸಿದ್ದರು. ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀಮತಿ ಶಕುಂತಳ ರಮಾನಂದ ಪ್ರಜ್ವಲನೆಗೈದರು.ಹಿಂದು ವಿದ್ಯಾವಾಯಿನೀಸಂಘ ಸುರತ್ಕಲ್ ನ ಕಾರ್ಯದರ್ಶಿ ಶ್ರೀರಂಗ ಹೆಚ್. ಅಗರಿ ಎಂಟರ್‌ಪ್ರೈಸಸ್ ನ ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.

error: Content is protected !!