ಬೆಂಗಳೂರು: ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಸಂಸ್ಥೆಯಾದ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಅಧಿಕೃತ ಅಧಿಸೂಚನೆಯ ಮೂಲಕ ವಿವಿಧ ಹುದ್ದೆಗಳ ನೇಮಕಾತಿ ನಡೆಸುತ್ತಿದ್ದು, ಪ್ರಸ್ತುತ ಕಾನೂನು ಸಲಹೆಗಾರರು ಮತ್ತು ಕಂಪನಿ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 2 ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆಯನ್ನು ನಿಗದಿಪಡಿಸಲಾಗಿದ್ದು, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ LLB, MBA ಅಥವಾ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಯಿಂದ ಸ್ನಾತಕೋತ್ತರ ಪದವಿಯನ್ನು ಪೂರೈಸಿರಬೇಕು. ಅಭ್ಯರ್ಥಿಗಳ ಆಯ್ಕೆಯಲ್ಲಿ ಶೈಕ್ಷಣಿಕ ಅರ್ಹತೆ ಮತ್ತು ಅನುಭವಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.

ಈ ನೇಮಕಾತಿಯಲ್ಲಿ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು 80 ವರ್ಷಗಳವರೆಗೆ ನಿಗದಿಪಡಿಸಲಾಗಿದೆ, ಇದು ಅನುಭವ ಹೊಂದಿರುವ ಹಿರಿಯ ವೃತ್ತಿಪರರಿಗೂ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡುತ್ತದೆ. ಆಸಕ್ತರು ತಮ್ಮ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 21 ಅಂತಿಮ ದಿನಾಂಕವಾಗಿದೆ. ಗಡುವಿನ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯು ಆಫ್ಲೈನ್ ಮೂಲಕ ಮಾತ್ರ ಇರುತ್ತದೆ. ಅರ್ಜಿ ಸಲ್ಲಿಸುವ ಹಂತಗಳು ಈ ಕೆಳಗಿನಂತಿವೆ:
- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ LLB, MBA ಅಥವಾ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಯಿಂದ ಸ್ನಾತಕೋತ್ತರ ಪದವಿಯನ್ನು ಪೂರೈಸಿರಬೇಕು.
- ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ಸರಿಯಾದ ವಿವರಗಳನ್ನು ಭರ್ತಿ ಮಾಡಿ.
- ಅರ್ಜಿಯೊಂದಿಗೆ ನಿಮ್ಮ ಐಡಿ ಪ್ರೂಫ್, ವಯಸ್ಸಿನ ದಾಖಲೆ, ಶೈಕ್ಷಣಿಕ ಪ್ರಮಾಣಪತ್ರಗಳು, ರೆಸ್ಯೂಮ್ ಮತ್ತು ಅನುಭವದ ಪತ್ರಗಳನ್ನು ಲಗತ್ತಿಸಿ.
- ಭರ್ತಿ ಮಾಡಿದ ಅರ್ಜಿಯನ್ನು ಸ್ವಯಂ ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಈ ಕೆಳಗೆ ನೀಡಲಾದ ವಿಳಾಸಕ್ಕೆ ಕಳುಹಿಸಿ:
ವ್ಯವಸ್ಥಾಪಕ ನಿರ್ದೇಶಕರು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಿಶ್ವೇಶ್ವರಯ್ಯ ಚಿಕ್ಕಗೋಪುರ, 9 ನೇ ಮಹಡಿ, ಅಂಬೇಡ್ಕರ್ ವೀಧಿ, ಬೆಂಗಳೂರು – 560001.