
ಕುಂದಾಪುರ: ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿಯೊಂದು ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಕ್ರವಾರ(ಏ.10) ಬೀಜಾಡಿ ಡಿವೈಡರ್ ಬಳಿ ನಡೆದಿದೆ.

ವಡ್ಡರ್ಸೆ ನೀರುಕೊಡ್ಲು ನಿವಾಸಿ ಶಾರದಾ(55) ಮೃತ ಮಹಿಳೆ.

ಶಾರದಾ ಅವರು ಕೋಟೇಶ್ವರ ಅಂಕದಕಟ್ಟೆಯಲ್ಲಿರುವ ತಮ್ಮ ತಂಗಿಯ ಮನೆಗೆ ತೆರಳುತ್ತಿದ್ದರೆಂದು ತಿಳಿದುಬಂದಿದೆ. ಈ ವೇಳೆ ಸ್ಕೂಟಿಯನ್ನು ಅವರ ಮಗ ಚಾಲನೆ ಮಾಡುತ್ತಿದ್ದು, ಅಪಘಾತದ ತೀವ್ರತೆಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿ ಓಡಿಸುತ್ತಿದ್ದ ಮಗ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಕುಂದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.