4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮೂಡುಬಿದಿರೆ: ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೆ. ಅಬ್ದುಲ್ ಬಶೀರ್ ಅಲಿಯಾಸ್ ಅರ್ಗ ಬಶೀರ್(50) ಬಂಧಿತ ವ್ಯಕ್ತಿ.

ಆರೋಪಿಯ ವಿರುದ್ಧ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಸುಮಾರು ನಾಲ್ಕು ವರ್ಷಗಳಿಂದ ಈತ ನ್ಯಾಯಾಲಯದ ಕಲಾಪಗಳಿಗೆ ಗೈರಾಗಿದ್ದರಿಂದ ನ್ಯಾಯಾಲಯವು ಈತನ ವಿರುದ್ಧ ದಸ್ತಗಿರಿ ವಾರಂಟ್ ಹೊರಡಿಸಿತ್ತು.

ಆರೋಪಿಯು ತೆಂಕಮಿಜಾರು ಗ್ರಾಮದ ಅರ್ಗ ಎಂಬಲ್ಲಿದ್ದ ತನ್ನ ಮನೆಯನ್ನು ಕುಟುಂಬದೊಂದಿಗೆ ತೊರೆದು, ಬಿ.ಸಿ. ರೋಡ್ ಸಮೀಪದ ಪರ್ಲಿಯಾ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದನು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಏಪ್ರಿಲ್ 18 ರಂದು ಆತನನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿ ಅಬ್ದುಲ್ ಬಶೀರ್ ಮೇಲೆ ಒಟ್ಟು 17ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈತನ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆಯಡಿ, ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ.

error: Content is protected !!