
ಬೆಳಗಾವಿ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಜ್ಯೋತಿ ನಗರದಲ್ಲಿ ನಡೆದಿದೆ.

ಶ್ರೀನಿಧಿ ಸಂತೋಷ್ ನಾವಿ (28) ಆತ್ಮಹತ್ಯೆಗೆ ಶರಣಾದ ಮಹಿಳೆ.
ಶ್ರೀನಿಧಿ ಹಾಗೂ ಸಂತೋಷ್ 2021ರಲ್ಲಿ ಮದುವೆಯಾಗಿದ್ದರು. ಗಂಡ, ಹೆಂಡತಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಕೌಟುಂಬಿಕ ಕಲಹ, ಕಿರುಕುಳಕ್ಕೆ ಬೇಸತ್ತ ಶ್ರೀನಿಧಿ ಮನೆಯ ಮೊದಲ ಮಹಡಿಯಲ್ಲಿ ಕಿಟಿಕಿ ಗ್ರಿಲ್ಗೆ ವೇಲ್ ಬಿಗಿದುಕೊಂಡು ನೇಣಿಗೆ ಶರಣಾಗಿದ್ದಾರೆ. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.

ತವರು ಮನೆಯವರೊಂದಿಗೆ ಮಾತನಾಡಬಾರದೆಂದು ಮೊಬೈಲ್ ಫೋನ್ ಕಿತ್ತುಕೊಂಡಿದ್ದ ಎಂದು ಶ್ರೀನಿಧಿ ಕುಟುಂಬಸ್ಥರು ಆರೋಪಿಸಿದ್ದಾರೆ. ಗಂಡ, ಅತ್ತೆ ಹಾಗೂ ಇನ್ನಿಬ್ಬರೂ ಸಂಬಂಧಿಕರ ವಿರುದ್ಧ ಶ್ರೀನಿಧಿ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ದೂರು ನೀಡಿದ್ದು, ಘಟನೆ ಸಂಬಂಧ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.