
ಬೆಂಗಳೂರು: ಮನೆಗೆ ಪ್ರಿಯಕರನ ಕರೆಸಿಕೊಂಡು ಬೆಂಕಿ ಹಚ್ಚಿ ಹತ್ಯೆಗೈದ ಪ್ರಕರಣದ ಆರೋಪಿತೆ ಪ್ರೇಮಾ, ಕಿರಣ್ ನನ್ನನ್ನು ಮದುವೆಯಾಗಲು ನಿರಾಕರಿಸಿದ್ದರಿಂದ ಹತ್ಯೆ ಮಾಡಿದ್ದೇನೆ ಎಂದು ಪೊಲೀಸರ ಎದುರು ಹೇಳಿಕೆ ನೀಡಿದ್ದಾಳೆ.
ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ

ಪ್ರಕರಣ ಸಂಬಂಧ ಬ್ಯಾಡರಹಳ್ಳಿ ಠಾಣೆ ಪೊಲೀಸರು, ಆರೋಪಿತೆಯನ್ನು 3 ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯದ ಹಿಂದಿನ ರಹಸ್ಯ ಬಾಯಿಬಿಟ್ಟಿದ್ದಾಳೆ.
ಕಿರಣ್ ಮತ್ತು ನಾನು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದೇವು. ಆದರೆ, ಇತ್ತೀಚೆಗೆ ಆತನ ಮಾಜಿ ಪ್ರೇಯಸಿ ಸಿಕ್ಕಳು ಎಂದು ನನ್ನನ್ನು ಕಡೆಗಣಿಸಲು ಆರಂಭಿಸಿದ್ದನು. ಜತೆಗೆ ತನ್ನನ್ನು ಮದುವೆಯಾಗಲು ಹಿಂದೇಟು ಹಾಕುತ್ತಿದ್ದ. ಅದರಿಂದ ಕೋಪಗೊಂಡು ಹತ್ಯೆಗೈದೆ ಎಂದು ಹೇಳಿಕೆ ನೀಡಿದ್ದಾಳೆ.