ನಾಳೆ ಬೆಂಗಳೂರಿಗೆ ಪ್ರಧಾನಿ ಭೇಟಿ: ಸಂಚಾರ ಮಾರ್ಗಗಳಲ್ಲಿ ಕೆಲ ಬದಲಾವಣೆ

ಬೆಂಗಳೂರು: ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಮೇ 10) ಆಗಮಿಸುತ್ತಿರುವ ಹಿನ್ನೆಲೆ ಕಾರ್ಯಕ್ರಮದ ಸ್ಥಳದಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಹೆಚ್ಎಎಲ್ ಗೇಟ್ ನಂ.30ರ ಮುಂಭಾಗ ನಾಳೆ ಮುಂಜಾನೆ 5ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಮಾರಂಭ ನಡೆಯಲಿದ್ದು, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಕೆಲವು ಮಾರ್ಪಾಡು ಮಾಡಿರೋದಾಗಿ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.


ಸಂಚಾರ ನಿರ್ಬಂಧಿತ ಪ್ರದೇಶಗಳು

  • ಹೆಚ್.ಎ.ಎಲ್ ವಿಮಾನ ನಿಲ್ದಾಣ ಎಕ್ಸಿಟ್ ರಸ್ತೆಯಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆಯಿಂದ ಡಿ.ಜಿ.ಸಿ.ಎ ಕಚೇರಿವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.(ಎರಡೂ ಬದಿಯಲ್ಲಿ)
  • ಹೆಚ್.ಎ.ಎಲ್ ವಿಮಾನ ನಿಲ್ದಾಣ ಗೇಟ್ ನಂ.30 ರಸ್ತೆಯಲ್ಲಿ ಅಂಬ್ರೆಲಾ ಜಂಕ್ಷನ್‌ನಿಂದ ಗೇಟ್ ನಂ.30ರ ವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.(ಎರಡೂ ಬದಿಯಲ್ಲಿ)

ವಾಹನ ನಿಲುಗಡೆ ನಿರ್ಬಂಧಿಸಿರುವ ರಸ್ತೆಗಳು

  • ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಎಸ್.ಡಿ ರಸ್ತೆ ಜಂಕ್ಷನ್‌ನಿಂದ ಟ್ರಿನಿಟಿ ಜಂಕ್ಷನ್‌ವರೆಗೆ
  • HAL ವಿಮಾನ ನಿಲ್ದಾಣ ಗೇಟ್ ನಂ. 30 ರಸ್ತೆಯಲ್ಲಿ ಅಂಬ್ರೆಲಾ ಜಂಕ್ಷನ್‌ನಿಂದ ಗೇಟ್ ನಂ. 30ರ ವರೆಗೆ
  • HAL ವಿಮಾನ ನಿಲ್ದಾಣ ಎಕ್ಸಿಟ್ ರಸ್ತೆಯಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆಯಿಂದ DGCA ಕಚೇರಿವರೆಗೆ

ಸಂಚಾರ ಸಲಹೆ /Traffic Advisory

ಪಾರ್ಕಿಂಗ್ ಸ್ಥಳಗಳು

  • HAL ಟ್ರಾನ್ಸ್‌ಪೋರ್ಟ್ ಡಿಪಾರ್ಟ್‌ಮೆಂಟ್ ಪಾರ್ಕಿಂಗ್ (ಎಸ್.ಡಿ ರಸ್ತೆ ಜಂಕ್ಷನ್).
  • ಸಾರ್ವಜನಿಕರಿಗೆ- ಸರ್ ಎಸ್.ಎಂ.ವಿ, ಕಾಲೇಜು ಮೈದಾನ, HAL ಬಸ್ ಯಾರ್ಡ್
  • ಬೆಳಗ್ಗೆ 9 ರಿಂದ ಮಧ್ಯಾಹ್ನ 3ರೆಗೆ ನೈಸ್ ರಸ್ತೆಯಲ್ಲಿಯೂ ಸಂಚಾರ ನಿರ್ಬಂಧ ವಿಧಿಸಲಾಗಿದ್ದು, ಈ ಮಾರ್ಗವಾಗಿ ಬರುವವರಿಗೆ ಪರ್ಯಾಯ ರಸ್ತೆಗಳನ್ನು ಬಳಸುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ.

ಪರ್ಯಾಯ ಮಾರ್ಗ
ತುಮಕೂರು ರಸ್ತೆಯಿಂದ ನೈಸ್​​ ರೋಡ್​​ ಮೂಲಕ ಕನಕಪುರ ರಸ್ತೆ ಕಡೆ ತೆರಳುವ ವಾಹನ ಸವಾರರು ಸಿಎಂಟಿಐ ಜಂಕ್ಷನ್​​ ಬಳಿ ಬಲ ತಿರುವು ಪಡೆದು ರಾಜ್​​ ಕುಮಾರ್​​ ಪುಣ್ಯಭೂಮಿ ರಸ್ತೆ ಮೂಲಕ ತೆರಳಬೇಕು. ತುಮಕೂರು ರಸ್ತೆಯಲ್ಲಿ ನಗರದ ಒಳಭಾಗದಿಂದ ಬಂದು ನೈಸ್​​ ರೋಡ್​​ ಮೂಲಕ ಕನಕಪುರ ರಸ್ತೆ ಕಡೆ ತೆರಳುವವರೂ ರಾಜ್​​ ಕುಮಾರ್​​ ಪುಣ್ಯಭೂಮಿ ರಸ್ತೆ ಮೂಲಕವೇ ಸಾಗಬೇಕಿದೆ.

error: Content is protected !!