ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ; ಸಂಚಾರದಲ್ಲಿ ವ್ಯತ್ಯಯ

ಮಂಗಳೂರು: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣ ಮುಂದುವರಿದಿದ್ದ ಹಿನ್ನೆಲೆಯಲ್ಲಿ ಸೆಕೆಯಿಂದ ಬಳಲುತ್ತಿದ್ದ ಜನರಿಗೆ ಇಂದು ಬೆಳ್ಳಂಬೆಳಗ್ಗೆ ಸುರಿದ ಧಾರಾಕಾರ ಮಳೆ ತಂಪಿನ ಅನುಭವ ನೀಡಿದೆ.

ಪಂಪ್‌ವೆಲ್‌, ಜ್ಯೋತಿ, ಬೋಂದೆಲ್‌, ತೊಕ್ಕೊಟ್ಟು, ಉಳ್ಳಾಲ ಸೇರಿದಂತೆ ಮಂಗಳೂರಿನ ಅನೇಕ ಪ್ರದೇಶಗಳಲ್ಲಿ ಮಳೆ ಜೋರಾಗಿ ಸುರಿದಿದೆ. ದಿಢೀರನೆ ಆರಂಭವಾದ ಮಳೆಯಿಂದಾಗಿ ಕೆಲಸಕ್ಕೆ ತೆರಳುತ್ತಿದ್ದ ಪ್ರಯಾಣಿಕರು ಹಾಗೂ ವಾಹನ ಸವಾರರು ಕೆಲಕಾಲ ತೊಂದರೆ ಅನುಭವಿಸಿದರು.

ಮಳೆ ನೀರು ರಸ್ತೆಗಳಲ್ಲಿ ಹರಿದ ಪರಿಣಾಮ ಕೆಲವೆಡೆ ವಾಹನಗಳು ನಿಧಾನಗತಿಯಲ್ಲಿ ಸಾಗಿ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಆದರೆ ತೀವ್ರ ಬಿಸಿಲು ಮತ್ತು ಉಕ್ಕಿನ ವಾತಾವರಣದಿಂದ ಕಂಗೆಟ್ಟಿದ್ದ ಜನರಿಗೆ ಈ ಮಳೆ ತುಸು ನಿರಾಳತೆಯನ್ನು ತಂದಿದೆ. ಮುಂದಿನ ಕೆಲವು ದಿನಗಳಲ್ಲೂ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

error: Content is protected !!