ಝಾನ್ಸಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಝಾನ್ಸಿಯಲ್ಲಿ ಯುವತಿಯೊಬ್ಬಳ ನಿಗೂಢ ಸಾವು ಭಾರಿ ಸಂಚಲನ ಮೂಡಿಸಿದ್ದು, ವರದಕ್ಷಿಣೆ ಕಿರುಕುಳ ಮತ್ತು ಕೊಲೆಯ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾಂಗ್ರೆಸ್ನ ವಿದ್ಯಾರ್ಥಿ ಸಂಘಟನೆಯಾದ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (NSUI) ಪದಾಧಿಕಾರಿಯಾಗಿರುವ ಪತಿ ಭರತ್ ವ್ಯಾಸ್ ಮತ್ತು ಆತನ ಪೋಷಕರ ವಿರುದ್ಧ ಪೊಲೀಸರು ಎಫ್ಐಆರ್ (FIR) ದಾಖಲಿಸಿದ್ದಾರೆ.

ಮೃತ ಯುವತಿಯನ್ನು ಪ್ರಿಯಾ ಮಿಶ್ರಾ ಎಂದು ಗುರುತಿಸಲಾಗಿದ್ದು, ಈಕೆ 2024 ರಲ್ಲಿ ಭರತ್ ವ್ಯಾಸ್ ನನ್ನು ವಿವಾಹವಾಗಿದ್ದಳು. ಪ್ರಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ಪತಿ ಹಾಗೂ ಇನ್-ಲಾಸ್ (ಅತ್ತೆ-ಮಾವ) ಮನೆಯವರು ಮೃತರ ಕುಟುಂಬಕ್ಕೆ ಮಾಹಿತಿ ನೀಡಿದ್ದರು. ಆದರೆ, ಈ ವಾದವನ್ನು ಸಂಪೂರ್ಣವಾಗಿ ತಳ್ಳಿಹಾಕಿರುವ ಪ್ರಿಯಾ ಪೋಷಕರು ಮತ್ತು ಸಂಬಂಧಿಕರು, ಮದುವೆಯಾದಾಗಿನಿಂದಲೂ ಹೆಚ್ಚುವರಿ ವರದಕ್ಷಿಣೆಗಾಗಿ ಪ್ರಿಯಾಗೆ ಸತತವಾಗಿ ಕಿರುಕುಳ ನೀಡಲಾಗುತ್ತಿತ್ತು ಮತ್ತು ಇದೇ ವರದಕ್ಷಿಣೆ ಹಪಾಹಪಿಯಿಂದಾಗಿ ಆಕೆಯನ್ನು ಪತಿ ಮತ್ತು ಆತನ ಪೋಷಕರೇ ಸೇರಿ ಕೊಲೆ ಮಾಡಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ


ಪ್ರಿಯಾ ಮಿಶ್ರಾ ಕುಟುಂಬಸ್ಥರು ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಝಾನ್ಸಿ ಪೊಲೀಸರು ಎನ್ಎಸ್ಯುಐ ನಾಯಕ ಭರತ್ ವ್ಯಾಸ್ ಹಾಗೂ ಆತನ ತಂದೆ-ತಾಯಿಯ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಿಯಾ ಸಾವು ಆತ್ಮಹತ್ಯೆಯೇ ಅಥವಾ ಕೊಲೆಯೇ? ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿ, ಮೊಬೈಲ್ ಕರೆಗಳ ದಾಖಲೆ (Call Records) ಹಾಗೂ ಸಾಕ್ಷಿಗಳ ಹೇಳಿಕೆಗಳನ್ನು ಪರಿಶೀಲಿಸುತ್ತಿದ್ದು, ತನಿಖೆಯನ್ನು ತೀವ್ರಗೊಳಿಸಿದ್ದಾರೆ.