
ಕಿನ್ನಿಗೋಳಿ: ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಸುರೇಶ್ ದೇವಾಡಿಗ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ 201-ಮೂಡಬಿದ್ರಿ ವಿಧಾನಸಭಾ ಕ್ಷೇತ್ರದ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಕಳೆದ 20 ವರ್ಷಗಳಿಂದ ಕೆಮ್ರಾಲ್ ಗ್ರಾಮ ಪಂಚಾಯತ್ ಸದಸ್ಯರಾಗಿ, ಪಂಚಾಯತ್ ಉಪಾಧ್ಯಕ್ಷರಾಗಿ, ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಿರುವ ಸುರೇಶ್ ದೇವಾಡಿಗ ಅವರು ಪಕ್ಷ ಸಂಘಟನೆಯ ಜೊತೆಗೆ ಊರಿನ ಧಾರ್ಮಿಕ, ಸಾಮಾಜಿಕ ಸಂಘಟನೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ.

ಪಂಜ ಕೊಯಿಕುಡೆ ಗ್ರಾಮದ ಬಡವರ ಪರ ಕೆಲಸ ಮಾಡಿರುವ ಅವರನ್ನು ಪಕ್ಷ ಗುರುತಿಸಿ ಈ ಜವಾಬ್ದಾರಿ ನೀಡಲಾಗಿದೆ.
