
ಬಂಟ್ವಾಳ: ಮಣಿಹಳ್ಳ–ಕಕ್ಯಪದವು ರಸ್ತೆಯ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆಮಾಡ ಎಂಬಲ್ಲಿ ಹಾಡಹಗಲೇ ಸುರತ್ಕಲ್ ಮೂಲದ ಬೈಕ್ ಸವಾರನನ್ನು ಅಡ್ಡಗಟ್ಟಿ ತಲವಾರು ತೋರಿಸಿ ಬೆದರಿಸಿ 8 ಲಕ್ಷ ರೂಪಾಯಿ ದರೋಡೆ ನಡೆಸಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಸುರತ್ಕಲ್ ನಿವಾಸಿ ಮಯ್ಯದಿ ಅವರು ಅಂಗಡಿಗಳಿಗೆ ಸಗಟು ದರದಲ್ಲಿ ಸಿಮೆಂಟ್ ಪೂರೈಕೆ ಮಾಡುತ್ತಿದ್ದು ಅದರ ಕಲೆಕ್ಷನ್ ಹಣವನ್ನು ಹಿಡಿದುಕೊಂಡು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಎರಡು ಬೈಕ್ ಗಳಲ್ಲಿ ಬಂದ ನಾಲ್ವರು ಆರೋಪಿಗಳು ಮಯ್ಯದಿ ಅವರನ್ನು ಅಡ್ಡಗಟ್ಟಿ ತಲವಾರು ತೋರಿಸಿ ಬೆದರಿಸಿ ಅವರ ಬಳಿಯಿದ್ದ ಹಣದ ಬ್ಯಾಗ್ ಕಸಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.