
ಉಡುಪಿ: ಹೆತ್ತವರನ್ನು ಮಗನೇ ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ ಪ್ರಕರಣ ಬ್ರಹ್ಮಾವರದ ಗಾಂಧಿನಗರದಲ್ಲಿ ನಿನ್ನೆ ರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಗಾಂಧಿನಗರದ ನಿವಾಸಿ ಮೆಹಬೂಬ್ ಅಲಿ ಹಾಗೂ ಪತ್ನಿ ಶಂಶಾದ್ ಬೇಗಂ ಕೊಲೆಯಾದವರು.

ಆರೋಪಿ ಶಾಹಿದ್ ಅಲಿ ಎಂಬಾತನನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.