“ಉಮರ್ ಖಾಲಿದ್‌ನಂಥ ಆರೋಪಿಯನ್ನು ದೇಶಭಕ್ತ ಎನ್ನುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು“ -ಡಾ.ಭರತ್ ಶೆಟ್ಟಿ

ಮಂಗಳೂರು: ಸೆಪ್ಟೆಂಬರ್ 2026ರಲ್ಲಿ ಬೆಂಗಳೂರಿನ ಎನ್‌ಎಲ್‌ಎಸ್‌ಐಯುನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಎಬಿವಿಪಿ ವಿರೋಧ ವ್ಯಕ್ತಪಡಿಸಿದಾಗ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು “ಉಮರ್ ಖಾಲಿದ್ ದೇಶಭಕ್ತ, ಗೋಡ್ಸೆಯನ್ನು ಆರಾಧಿಸುವ ಎಬಿವಿಪಿಗೆ ಮಾತನಾಡುವ ನೈತಿಕ ಹಕ್ಕಿಲ್ಲ” ಎಂದು ಹೇಳಿರುವುದು ಖಂಡನೀಯ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿ ಗಲಭೆ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯಡಿ ಜೈಲು ಸೇರಿರುವ, ಸುಪ್ರೀಂ ಕೋರ್ಟ್‌ನಿಂದಲೂ ಜಾಮೀನು ಸಿಗದ ವ್ಯಕ್ತಿಯನ್ನು ದೇಶಭಕ್ತ ಎಂದು ಕರೆಯುವುದು ಕಾಂಗ್ರೆಸ್‌ನ ದೇಶವಿರೋಧಿ ಮನಸ್ಥಿತಿ ಮತ್ತು ತುಷ್ಟೀಕರಣ ರಾಜಕಾರಣಕ್ಕೆ ಸಾಕ್ಷಿ. ದೇಶವನ್ನು ಒಡೆಯಲು ಹೊರಟವರ ಪರ ನಿಲ್ಲುವ ಕಾಂಗ್ರೆಸ್‌ನ ತುಕ್ಡೆ-ತುಕ್ಡೆ ನೀತಿ ಮತ್ತೊಮ್ಮೆ ಬಟಾಬಯಲಾಗಿದೆ.

ದೇಶಭಕ್ತ ಯುವಶಕ್ತಿಯನ್ನು ಅವಮಾನಿಸುವ ಹರಿಪ್ರಸಾದ್ ಕ್ಷಮೆ ಯಾಚಿಸಬೇಕು. ಜನರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಡಾ. ಭರತ್ ಶೆಟ್ಟಿ ಎಚ್ಚರಿಸಿದ್ದಾರೆ.

Advt
error: Content is protected !!